ಕನ್ನಡ ಪರಿಚಾರಿಕೆ, ಸಂಘಟನೆ, ಜಾನಪದ, ಶಿಕ್ಷಣ, ಮಾಧ್ಯಮ ಸೇರಿ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು ಅವರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿಯೂ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಕ್ಕೂ ಧುಮುಕಿದ್ದ ಗೊರುಚ ಅವರು, ಕನ್ನಡ ನಾಡುನುಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಗೊರುಚ ಅವರು ಲೋಕಸಭೆಯಲ್ಲಿ ನಾನು ಪ್ರತಿನಿಧಿಸುವ ಮಂಡ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿರುವುದು ನನ್ನ ಸಂತೋಷವನ್ನು ಇಮ್ಮಡಿಗೊಳಿಸಿದೆ,
ಡಿಸೆಂಬರ್
20
ರಿಂದ ಮಂಡ್ಯದಲ್ಲಿ ಮೂರು ದಿನಗಳ ಕಾಲ
ಸಾಹಿತ್ಯ ಸಮ್ಮೇಳನ ನಡೆಯಲಿದೆ.